ಬೆಂಗಳೂರು: ನಾಟಕ ರಚನೆಕಾರ, ನಟ ಗಿರೀಶ್ ಕಾರ್ನಾಡ್ ಅವರಿಗೆ ಟಾಟಾ ಸಾಹಿತ್ಯ ಜೀವಮಾನ ಪ್ರಶಸ್ತಿ ಘೋಷಿಸಲಾಗಿದೆ.
ಮುಂಬೈನಲ್ಲಿರುವ ಪ್ರದರ್ಶನ ಕಲೆಗಳ ರಾಷ್ಟ್ರೀಯ ಕೇಂದ್ರದಲ್ಲಿ ನ.19ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಭಾರತೀಯ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.
ಈ ಕುರಿತು ಪ್ರತಿಕ್ರಿಯಿಸಿದ ಗಿರೀಶ್ ಕಾರ್ನಾಡ್, ‘ನಾಟಕ ರಚನೆಕಾರನಾದ ನನಗೆ ಟಾಟಾ ಸಾಹಿತ್ಯ ಪ್ರಶಸ್ತಿ ಸಿಕ್ಕಿರುವುದು ಗೌರವ ತಂದಿದೆ. ಇದಕ್ಕಿಂತ ಹೆಚ್ಚಿನದು ಇನ್ನೇನು ಬಯಸಲಿ. ನಾಟಕಕಾರನ ಜೀವನದಲ್ಲಿ ಇದು ಅಮೂಲ್ಯ ಕ್ಷಣ’ ಎಂದು ಅವರು ಹೇಳಿದರು.