ಇರುವೆ ಕಚ್ಚಿತು: ‘ತುಳಸಿ ವಿವಾಹಕ್ಕಾಗಿ (ತುಳಸಿ ಪೂಜೆ) ಮನೆಯಲ್ಲಿ ಕಬ್ಬನ್ನು ತಂದು ಇಡಲಾಗಿತ್ತು. ಈ ವೇಳೆ ಅದಕ್ಕೆ ಕಪ್ಪು ಇರುವೆ ಬಂದಿದ್ದು, ತಾಯಿ ಕೆಲಸಕ್ಕೆ ತೆರಳಿದ ಸಂದರ್ಭ ಅದು ಶಿವುವನ್ನು ಸಂಪೂರ್ಣವಾಗಿ ಆಕ್ರಮಿಸಿವೆ. ಕೆಲಹೊತ್ತು ಅದು ಆತನನ್ನು ಕಚ್ಚಿದ್ದು, ನೋವು ತಾಳಲಾರದೆ ಆತ ಕಿರುಚಾಟ ಪ್ರಾರಂಭಿಸಿದ್ದಾನೆ. ಅದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದ್ದಾಗ ಆತ ಅಸ್ವಸ್ಥಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ನೀಡಲಾಯಿತು. ಆದರೆ ಆಗ ಅವನ ಹೃದಯದಿಂದ ರಕ್ತದ ಸಂಚಾರ ಸ್ತಬ್ಧಗೊಂಡಿದ್ದರಿಂದ ಚಿಕಿತ್ಸೆ ಫಲಿಸದೇ ಶಿವು ಅಸುನೀಗಿದ್ದಾನೆ’ ಎಂದು ಜನಶಕ್ತಿ ವೇದಿಕೆಯ ಮಾಧವ ನಾಯಕ ತಿಳಿಸಿದರು.