ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರುವಲ್ಲಿ ಯುವಜನರ ಪಾತ್ರ ಮಹತ್ವದ್ದು

Last Updated 4 ನವೆಂಬರ್ 2017, 5:19 IST
ಅಕ್ಷರ ಗಾತ್ರ

ವಿಜಯಪುರ : ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯುವಕ ಪಾತ್ರ ಮಹತ್ತರವಾಗಿದೆ ಎಂದು ತಾಲ್ಲೂಕು ಯುವ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಹೇಳಿದರು.

ಇಲ್ಲಿನ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುವ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಮಾಡಿ, ಅವರು ಮಾತನಾಡಿದರು.

ಯುವ ಕಾರ್ಯಕರ್ತರು ಪಕ್ಷದ ಭದ್ರ ಬುನಾದಿ ಮತ್ತು ಶಕ್ತಿಯಾಗಿದ್ದಾರೆ. ಪಕ್ಷದ ಕಾರ್ಯಕರ್ತರು ತಳಮಟ್ಟದಿಂದ ಸಂಘಟಿತರಾಗಬೇಕು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಸಂಘಟಿತರಾಗಬೇಕು. ಪ್ರತಿ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ಸಿದ್ಧರಾಗಬೇಕು ಎಂದರು.

ನಗರದ ಘಟಕದ ಅಧ್ಯಕ್ಷ ವಿ.ಎಂ.ನಾಗರಾಜ್ ಮಾತನಾಡಿ, ಶತಮಾನದ ಇತಿಹಾಸ ಹೊಂದಿರುವ ರಾಷ್ಟ್ರೀಯ ಕಾಂಗ್ರೆಸ್, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ತ್ಯಾಗ ಬಲಿದಾನ ಮಾಡಿದೆ. ಶಕ್ತಿಶಾಲಿ ದೇಶವನ್ನಾಗಿಸು ಅಭಿವೃದ್ಧಿ ಪಡಿಸಿದೆ. ದೇಶಕ್ಕೆ ಬಿಜೆಪಿಯ ಕೊಡುಗೆ ಶೂನ್ಯ ಎಂದರು.

ದೇಶಕ್ಕಾಗಿ ಏನನ್ನೂ ಮಾಡದೇ ಬಿಜೆಪಿ ಅಧಿಕಾರದ ಆಸೆಗಾಗಿ ದೇಶವು ಎಲ್ಲ ರಂಗಗಳಲ್ಲಿ ಹಿಂದುಳಿದಿದೆ ಎಂದು ಸುಳ್ಳು ಆರೋಪ ಮಾಡುತ್ತಿದೆ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಮುಖಂಡರಾದ ಕೆ.ವೆಂಕಟಸ್ವಾಮಿ, ವಿ.ಮಂಜುನಾಥ್, ಎಂ.ಸತೀಶ್ ಕುಮಾರ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ನಾಗೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಸುಮಂತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹನಾಯಕ್, ನಗರ ಘಟಕದ ಯುವ ಅಧ್ಯಕ್ಷ ಆರ್.ಅಮೃತರಾಜ್, ತಿರುಮಲೇಶ್, ನಾರಾಯಣಸ್ವಾಮಿ, ವಿ.ಎನ್.ಅಲ್ಲಾಭಕಾಷ್, ಯುವ ಮುಖಂಡರಾದ ಪೃಥ್ವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT