ಬಂದ್ ಜಿಲ್ಲೆಯಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಎರಡು ದಿನಗಳ ಹಿಂದೆ ಪ್ರಕಟಣೆ ನೀಡಿದ್ದ ಹಿನ್ನೆಲೆಯಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗಿಲ್ಲ. ಕೆಲವರು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ತೆರಳಿದರು. ಶನಿವಾರದಿಂದ ಮತ್ತೆ ಖಾಸಗಿ ಆಸ್ಪತ್ರೆಗಳು ಆರಂಭಗೊಳ್ಳಲಿವೆ ಎಂದು ಭಾರತೀಯ ವೈದ್ಯ ಸಂಘದ ಜಿಲ್ಲಾ ಪದಾಧಿಕಾರಿಗಳು ತಿಳಿಸಿದ್ದಾರೆ.