ಸ್ಥಳಕ್ಕೆ ಬಂದಿದ್ದ ಚಿಕ್ಕಬಳ್ಳಾಪುರ ಸಾರಿಗೆ ಇಲಾಖೆ ಜಿಲ್ಲಾಧಿಕಾರಿ ಆಂಟೋನಿ ಅವರು, ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು. ಸ್ಥಳದಲ್ಲೇ ₹ 50 ಸಾವಿರ ಪರಿಹಾರ ವಿತರಣೆ ಮಾಡುವುದು, ಮೃತರ ಕುಟುಂಬಕ್ಕೆ ಕಾನೂನಿನಡಿ ಸಿಗುವ ಪರಿಹಾರವನ್ನು ಪ್ರಾಮಾಣಿಕವಾಗಿ ಅವರ ಕುಟುಂಬಕ್ಕೆ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಟ್ಟರು.