ಬಸ್ ಚಿಕ್ಕಬಳ್ಳಾಪುರದಿಂದ ಕೋಲಾರ ಕಡೆಗೆ ಹೋಗುತ್ತಿತ್ತು. ಚಾಲಕ ಜೆ.ವೆಂಕಟಾಪುರ ಬಳಿ ರಸ್ತೆ ಗುಂಡಿ ತಪ್ಪಿಸಲು ಪ್ರಯತ್ನಿಸಿದ ವೇಳೆ ಬಸ್ ಹೊಂಡಾ ಆಕ್ಟೀವ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಭಾಗ್ಯಮ್ಮ ಮತ್ತು ಅವರ ಸಹೋದರ ಮುರುಳಿ ಸ್ಥಳದಲ್ಲಿಯೇ ಮೃತಪಟ್ಟರು. ಭಾಗ್ಯಮ್ಮ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿಯಲ್ಲಿ ಕಂಪ್ಯೂಟರ್ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.