‘ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮೀನಮ್ಮ ಎಂಬುವರ ಪುತ್ರಿ ಅಕ್ಷತಾ, ಸರಸ್ವತಿಪುರಂ 14ನೇ ಮುಖ್ಯರಸ್ತೆಯ ಬ್ಯೂಟಿ ಪಾರ್ಲರ್ನಲ್ಲಿ ಕೆಲಸ ಮಾಡುತ್ತಿದ್ದರು. ರಾಯಚೂರಿನ ವೀರೇಶ್ ಸರಸ್ವತಿಪುರಂನ ಹೋಟೆಲೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಇದಕ್ಕೆ ಹುಡುಗಿಯ ತಾಯಿ ಒಪ್ಪಿ, ದೇವಸ್ಥಾನದಲ್ಲಿ ಮದುವೆ ಮಾಡಿಸಿದ್ದರು. ಬಳಿಕ ಇವರು ಗಂಗೋತ್ರಿ ಬಡಾವಣೆಯಲ್ಲಿ ವಾಸವಾಗಿದ್ದರು’ ಎಂದು ವಿವರಿಸಿದ್ದಾರೆ.