ಕೆಲವೇ ಸಮಯದ ಬಳಿಕ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
‘ಪ್ರಜ್ವಲ್ ಸ್ಪರ್ಧೆ ಖಚಿತ‘
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪುತ್ರ ಪ್ರಜ್ವಲ್ ಸ್ಪರ್ಧೆ ಖಚಿತ. ಇದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕ್ಷೇತ್ರ ಯಾವುದು ಎಂಬುದನ್ನು ಗೌಡರೇ ನಿರ್ಧಾರ ಮಾಡಲಿದ್ದಾರೆ. ಹಾಸನ ಜಿಲ್ಲೆ ಬೇಲೂರು ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಎರಡೂ ಕಡೆ ವಾತಾವರಣ ಚೆನ್ನಾಗಿದೆ ಎಂದು ಭವಾನಿ ರೇವಣ್ಣ ಹೇಳಿದರು.
ಈ ಹಿಂದೆ ನಮ್ಮ ಕುಟುಂಬದಿಂದ ರೇವಣ್ಣ, ಕುಮಾರಸ್ವಾಮಿ ಇಬ್ಬರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಗೌಡರು ಹೇಳಿದ್ದರು ಎಂದರು.
ವಿಕಾಸ ಯಾತ್ರೆ ಅಂಗವಾಗಿ ಮನೆ ದೇವರು ಶಿವನಿಗೆ ಪೂಜೆ ಸಲ್ಲಿಸಲಾಯಿತು. ಸಂಜೆ ನಂಜನಗೂಡು ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಲಾಗುವುದು. ನಾಳೆ ಚಾಮುಂಡಿಗೆ ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಲಾಗುವುದು. ನಾನು ಯಾತ್ರೆಯಲ್ಲಿ ಭಾಗವಹಿಸುತ್ತಿಲ್ಲ. ಅನಿತಾ ಸ್ಪರ್ಧೆ ವಿಚಾರ ಗೊತ್ತಿಲ್ಲ. ಅದನ್ನು ಗೌಡರು ನಿರ್ಧರಿಸುತ್ತಾರೆ ಎಂದು ಹೇಳಿದರು.