ಧರಣಿ ಕುರಿತು ಚರ್ಚಿಸಲು ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರ ಮಹಾನಗರ ಪಾಲಿಕೆ ವ್ಯಾಪ್ತಿಯಿಂದ 18.ಕಿ.ಮೀ ಮತ್ತು ನಗರಸಭೆ ಪುರಸಭೆ ವ್ಯಾಪ್ತಿಯ 10 ಕಿ.ಮೀ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 5.ಕಿ.ಮೀ ಒಳ ಪಟ್ಟು ರೈತರು ಅನೇಕ ವರ್ಷಗಳಿಂದ ಸ್ವಾಧೀನದಲ್ಲಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರೂ ಈವರೆಗೂ ಹಕ್ಕುಪತ್ರ ನೀಡಲು ಮುಂದಾಗಿಲ್ಲ. ಭೂಸ್ವಾಧೀನ ನೆಪದಲ್ಲಿ ಉಳುಮೆ ಚೀಟಿ ನೀಡಿಲ್ಲ. ಸರ್ಕಾರ ಪರೋಕ್ಷವಾಗಿ ರೈತರ ಮೇಲೆ ಪ್ರಹಾರ ಮಾಡುತ್ತಿದೆ ಎಂದು ದೂರಿದರು.