ನೋಟಿಸ್ ಜಾರಿ: ಪ್ರಕರಣವನ್ನು ಇಲಾಖೆಯ ಮೂಲಕವೇ ಇತ್ಯರ್ಥಪಡಿಸಿಕೊಳ್ಳುವ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನವೀನ್ ಕುಮಾರ್ ಅವರಿಗೆ ಗುಂಡ್ಲುಪೇಟೆ ಬಫರ್ ಜೋನ್ನ ವಲಯ ಅರಣ್ಯಾಧಿಕಾರಿಗಳು ಅ.30ರವರೆಗೆ ಕಾಲಾವಕಾಶ ನೀಡಿದ್ದರು. ಆದರೆ, ಅವರು ವಿಚಾರಣೆಗೆ ಹಾಜರಾಗದ ಕಾರಣ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲಾಖೆ ನೋಟಿಸ್ನಲ್ಲಿ ಎಚ್ಚರಿಕೆ ನೀಡಿದೆ.