1995ರಲ್ಲಿ ದಿ.ಬಿ.ಎಸ್. ಮುತ್ತಪ್ಪ ಅವರು ಮೈದಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಈ ಮೈದಾನಕ್ಕೆ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ದೊರಕಿತ್ತು. ನಂತರದ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ಸರ್ವ ಶಿಕ್ಷಣ ಇಲಾಖೆ, ಯುವಜನ ಸೇವಾ ಇಲಾಖೆಯ ಅನುದಾನದಲ್ಲಿ ತಡೆಗೋಡೆ, ಗ್ಯಾಲರಿ ಹಾಗೂ ವೇದಿಕೆಗಳು ನಿರ್ಮಾಣಗೊಂಡಿದ್ದರೂ ಅದರ ನಿರ್ವಹಣೆಯಿಲ್ಲದೇ ಸಂಪೂರ್ಣ ಹಾಳಾಗಿ ಹೋಗಿವೆ. ಅಲ್ಲದೇ, ಗ್ಯಾಲರಿ ನಿರ್ಮಾಣದ ಕಾಮಗಾರಿಯು ಅರ್ಧಕ್ಕೆ ನಿಂತಿದೆ.