‘ಬಸವ ಜಯಮೃತ್ಯುಂಜಯ ಶ್ರೀಗಳ ಬಗ್ಗೆಯೂ ಸಾಕಷ್ಟು ಆರೋಪಗಳಿವೆ. ಅವುಗಳನ್ನು ಈ ಸಮಯದಲ್ಲಿ ಪ್ರಸ್ತಾಪ ಮಾಡುವುದಿಲ್ಲ. ಲಿಂಗಾಯತರಿಂದ ಬಿರುದು ಪಡೆದುಕೊಳ್ಳಲು ಸ್ವಾಮೀಜಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಹರಿಹಾಯ್ದರು. ನ. 8ರಂದು ಬೆಂಗಳೂರಿನಲ್ಲಿ ಸಮಾಜದ ಮುಖಂಡರ ಸಭೆ ನಡೆಸಿ, ಮುಂದಿನ ನಿರ್ಧಾರವನ್ನು ಕೈಗೊಳ್ಳುವುದಾಗಿ ಶಾಮನೂರು ತಿಳಿಸಿದರು.