ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ ಸಮಾಜವನ್ನು ಒಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ.ಪಾಟೀಲ್ ಹಾಗೂ ವಿನಯ ಕುಲಕರ್ಣಿ ಅವರ ಮೂಲಕ ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಸಚಿವರಿಗೆ ಹಣ ನೀಡಿದ್ದಾರೆ’ ಎಂದು ಆರೋಪಿಸಿದರು. ‘ಬೆಳಗಾವಿ ಅಧಿವೇಶನ ಪ್ರವಾಸದ ಕಾರ್ಯಕ್ರಮವಾಗಬಾರದು. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಬೇಕು.