ರಬಕವಿ-ಬನಹಟ್ಟಿ: ಸಮೀಪದ ಹಿಪ್ಪರಗಿಯ ಇಂಚಗೇರಿ ಮಠದ ಸಂಗಮೇಶ್ವರ ಮಹಾರಾಜರ 86ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಆಧ್ಯಾತ್ಮ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ₹ 20 ಲಕ್ಷ ವೆಚ್ಚದ ಸಾಂಸ್ಕೃತಿಕ ಭವನ ಮತ್ತು ಸಭಾ ಮಂಟಪದ ಉದ್ಘಾಟನೆ ಹಾಗೂ ಏಕತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಇದೇ ವೇಳೆ ನಡೆಯಲಿದೆ.