ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರಾಳ ದಿನಾಚರಣೆ ಹಾಸ್ಯಾಸ್ಪದ’

Last Updated 9 ನವೆಂಬರ್ 2017, 6:33 IST
ಅಕ್ಷರ ಗಾತ್ರ

ಹಾಸನ: ದೇಶದಲ್ಲಿ ನೋಟು ನಿಷೇಧ ಮಾಡಿದ ಆರಂಭದಲ್ಲಿ ಸ್ವಾಗತ ಮಾಡಿದ್ದ ರಾಜ್ಯ ಕಾಂಗ್ರೆಸ್ ನಾಯಕರು, ಇಂದು ಕರಾಳ ದಿನಾಚರಣೆ ಆಚರಣೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

ನೋಟು ನಿಷೇಧ ಮಾಡಿದಾಗ ಕಾಂಗ್ರೆಸ್ ಸಚಿವರಾದ ಟಿ.ಬಿ.ಜಯಚಂದ್ರ, ರಮೇಶ್‌ಕುಮಾರ್‌, ರೋಷನ್‌ ಬೇಗ್‌, ಬಸವರಾಜ ರಾಯರೆಡ್ಡಿ ಸ್ವಾಗತ ಮಾಡಿದ್ದರು. ಸಚಿವ ಎಚ್‌.ಕೆ. ಪಾಟೀಲ ಒಂದು ಹೆಜ್ಜೆ ಮುಂದೆ ಹೋಗಿ ಅಂದಿನ ಹಣಕಾಸು ಸಚಿವ ಚಿದಂಬರ್‌ಗೆ ನೋಟು ರದ್ದು ಮಾಡುವಂತೆ ಸಲಹೆ ನೀಡಿದ್ದೆ ಎಂದು ಹೇಳಿದ್ದರು.

ಆದರೆ ಇಂದು ರಾಜಕೀಯ ಕಾರಣಕ್ಕಾಗಿ ಕರಾಳ ದಿನಾಚರಣೆಗೆ ಮುಂದಾಗಿದ್ದಾರೆ. ಇದು ಕಾಂಗ್ರೆಸ್ ನ ಗೋಸುಂಬೆತನಕ್ಕೆ ಸಾಕ್ಷಿ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT