ಸಭೆಯ ನೇತೃತ್ವ ವಹಿಸಿ ಮಾತನಾಡಿದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ, ‘ಉತ್ತರ ಕರ್ನಾಟಕದ ರೈತರ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ಇಲ್ಲಿನ ಪ್ರಮುಖ ಬೆಳೆಗಳಾದ ಹತ್ತಿ, ಗೋವಿನಜೋಳ, ಶೆಂಗಾ, ಸೊಯಾಬಿನ್, ಕಬ್ಬಿಗೆ ಸೂಕ್ತ ಬೆಲೆ ಸಿಗದೆ ರೈತರು ಸಂಕಷ್ಟದಲ್ಲಿದ್ದಾರೆ. ಜನಪ್ರತಿನಿಧಿಗಳು ಈ ಕುರಿತು ಚಿಂತನೆ ನಡೆಸದೆ ಚುನಾವಣೆ ಉಮೇದಿಯಲ್ಲಿದ್ದಾರೆ’ ಎಂದು ಆರೋಪಿಸಿದರು.