ಸುಂಟಿಕೊಪ್ಪ: ಇಲ್ಲಿನ ಅಯ್ಯಪ್ಪ ದೇವಸ್ಥಾನದ ಮುಂಭಾಗದ ಎಮ್ಮೆಗುಂಡಿ- ನಾಕೂರು ಶಿರಂಗಾಲಕ್ಕೆ ತೆರಳುವ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಜನಸಾಮಾನ್ಯರು ಮತ್ತು ವಾಹನ ಚಾಲಕರು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಕಾಮಗಾರಿಗಾಗಿ ಎಮ್ಮೆಗುಂಡಿ ಗ್ರಾಮದ ನಾಟಿ ವೈದ್ಯ ರಾಮೇಗೌಡ ಸೇರಿದಂತೆ ಈ ಭಾಗದ ಜನರು ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.