ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ದಿ ಸಂಸ್ಥೆಯ ಅಧಿಕಾರಿ ಕೆಂಪಯ್ಯ ಮಾತನಾಡಿ ಮಳೆ ಕಡಿಮೆ ಬಂದರೂ ಸಿರಿಧಾನ್ಯವನ್ನು ಬೆಳೆಯಬಹುದು. ಕಡಿಮೆ ಖರ್ಚಿನಲ್ಲಿ ಉತ್ತಮ ಆರೋಗ್ಯದೊಂದಿಗೆ ಉತ್ತಮ ಲಾಭವನ್ನು ಪಡೆದುಕೊಳ್ಳಲು ಸಹಕಾರಿ ಆಗಿದೆ. ಇದರ ಪ್ರಯೋಜನ ಪಡದುಕೊಂಡು ರೈತರು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಕೃಷಿ ಅಧಿಕಾರಿ ರಮೇಶ್, ಲತಾ, ಸುಚಿತ್ರಾ, ವಂದಿತಾ, ಸಿದ್ದಾರ್ಥ, ಪ್ರದೀಪ್, ವರದರಾಜು ಇದ್ದರು.