ಆಚರಣೆ ನೆಪದಲ್ಲಿ ಸಾರ್ವಜನಿಕ ಸ್ಥಫಳದಲ್ಲಿ ಫ್ಲೆಕ್ಸ್ ಅಳವಡಿಸುವುದು, ಮೆರವಣಿಗೆ ಹಾಗೂ ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಪಿಎಸ್ಐ ಎಸ್.ಎಸ್.ರವಿಕಿರಣ್, ಪುರಸಭೆ ಸದಸ್ಯ ಅಬ್ದುಲ್ ಅಜೀಜ್, ಅರ್ಷದ್, ತಾಲ್ಲೂಕು ಮುಸ್ಲಿಂ ಹಿತರಕ್ಷಣಾ ಸಮಿತಿ ಅಧ್ಯಕ್ಷ ರಹಮತ್ ಜಾನ್ ಬಾಬು, ಪೊಲೀಸ್ ಸಿಬ್ಬಂದಿಯಾದ ವಿ.ಜೆ.ಮಂಜುನಾಥ್, ಅನಂತ್, ನಯೀಮ್ ಅಹಮ್ಮದ್, ಹಬೀಬುಲ್ಲಾ, ರಾಧಾ, ಮುಸ್ಲಿಂ ಮುಖಂಡರು ಭಾಗವಹಿಸಿದ್ದರು. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.