ಆಲಮೇಲ: ಸಮೀಪದ ಮಲಘಾಣ ಗ್ರಾಮದಲ್ಲಿ ಶರಣಬಸವೇಶ್ವರ ಜಾತ್ರೆಯ ನಿಮಿತ್ತ ಭಕ್ತರ ಹರ್ಷೋದ್ಗಾರದ ನಡುವೆ, ವಿಜೃಂಭಣೆಯಿಂದ ರಥೋತ್ಸವ ಜರುಗಿತು.
ಪೀಠಾಧಿಪತಿ ಜಡೆಯ ಶಾಂತಲಿಂಗೇಶ್ವರ ಶ್ರೀಗಳ ನೇತೃತ್ವದಲ್ಲಿ ಕಲಕೇರಿಯ ಸಿದ್ಧರಾಮ ಶ್ರೀಗಳ ಸಾನ್ನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಾದ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಜಂಗಮ ಗಣಾರಾಧನೆ, ಪ್ರಸಾದ ವಿತರಣೆ ಜರುಗಿದವು.