ವಿಧಾನಪರಿಷತ್ತಿನ ಸದಸ್ಯರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಈ ಹಿಂದೆ ಸಭಾ ನಾಯಕರಾಗಿದ್ದರು. ಇದೇ ವರ್ಷದ ಜೂನ್ ತಿಂಗಳಿನಲ್ಲಿ ನಡೆದ ಅಧಿವೇಶನದ ಹೊತ್ತಿಗೆ ಗೃಹ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರು. ಅಧಿವೇಶನ ಮುಗಿಯುವವರೆಗೆ ಸಚಿವರಾಗಿ ಮುಂದುವರಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಮೇಶ್ವರ ಅವರಿಗೆ ಸೂಚಿಸಿದ್ದರು.