ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶವವಿಟ್ಟು ಕೋಲಿ ಸಮಾಜ ಪ್ರತಿಭಟನೆ

Last Updated 10 ನವೆಂಬರ್ 2017, 10:25 IST
ಅಕ್ಷರ ಗಾತ್ರ

ಶಹಾಪುರ: ಹಣಕಾಸಿನ ವಿಷಯದಲ್ಲಿ ಉಂಟಾದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲ್ಲೂಕಿನ ಮಹಲರೋಜಾ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಣಮಂತರಾಯ ಹೊನ್ನಪ್ಪ ನಾಯ್ಕೋಡಿ ಅಲಿಯಾಸ್ ಪೂಜಾರಿ(58) ಕೊಲೆಯಾದವರು. ನಿಂಗಪ್ಪ ಭೀಮರಾಯ ಕೊಂಗಡಿ ಕೊಲೆ ಆರೋಪಿ.

‘ಬೆಳಿಗ್ಗೆ 7ರ ಸುಮಾರಿಗೆ ಹಣಮಂತರಾಯ ಹೊಲಕ್ಕೆ ಹೋಗಿ ಮರಳಿ ಮನೆಗೆ ಬರುತ್ತಿರುವಾಗ ಅದೇ ಗ್ರಾಮದ ಆರೋಪಿ ನಿಂಗಪ್ಪ ಮಚ್ಚಿನಿಂದ ಮುಖ, ತಲೆಗೆ ಹೊಡೆದು ಗಾಯಗೊಳಿಸಿದ. ರಕ್ತದ ಮಡುವಿನಲ್ಲಿ ಬಿದ್ದ ಹಣಮಂತರಾಯ ಅವರನ್ನು ಶಹಾಪುರ ಆಸ್ಪತ್ರೆಗೆ ತಕ್ಷಣವೇ ಕರೆದೊಯ್ಯಲಾಯಿತು. ಹೆಚ್ಚಿನ ಚಿಕಿತ್ಸೆಗೆ ಕಲಬುರ್ಗಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದರು’ ಎಂದು ಗೋಗಿ ಠಾಣೆಯ ಪಿಎಸ್‌ಐ ಕೃಷ್ಣಾ ಸುಬೇದಾರ ತಿಳಿಸಿದ್ದಾರೆ.

ಕೊಲೆ ವಿಷಯ ತಿಳಿಯುತ್ತಿದ್ದಂತೆಯೇ ಕೋಲಿ ಸಮಾಜದ ಮುಖಂಡರು ಮತ್ತು ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ತಡೆಗಟ್ಟಿ, ಶವವನ್ನು ಹೊರ ತೆಗೆದು ಪ್ರತಿಭಟನೆ ನಡೆಸಿದರು.

ಇದರಿಂದ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಜಮಾವಣೆಗೊಂಡರು. ಪೊಲೀಸ್‌ ಅಧಿಕಾರಿಗಳು ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲು ಯತ್ನಿಸಿದರು. ನಂತರ ಶವವನ್ನು ಸರ್ಕಾರಿ ಒಯ್ದು ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಪ್ರತಿಭಟನಾ ಸ್ಥಳಕ್ಕೆ ಬಂದು ಚರ್ಚಿಸಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು. ನಂತರ ಗ್ರಾಮಕ್ಕೂ ಭೇಟಿ ನೀಡಿ ನೀಡಿ, ಪರಿಶೀಲಿಸಿದರು. ಎಲ್ಲರೂ ಶಾಂತತೆ ಕಾಪಾಡಬೇಕು. ಅಹಿತಕರ ವಾತಾವರಣಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT