ಗುರುಮಠಕಲ್: ₹ 500 ಮತ್ತು ₹ 1000 ಮುಖಬೆಲೆಯ ನೋಟು ಅಮಾನ್ಯಗೊಂಡು ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದ ಎದುರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಸಂಭ್ರಮ ಆಚರಿಸಿದರು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ನಾಗರತ್ನಾ ಕುಪ್ಪಿ ಮಾತನಾಡಿ, ‘ನೋಟು ಅಮಾನ್ಯದಿಂದ ನಕಲಿ ನೋಟುಗಳ ಹಾವಳಿ ನಿಯಂತ್ರಣಕ್ಕೆ ಬಂದಿದೆ. ಇದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ನೆಮ್ಮದಿಯ ಜನಜೀವನಕ್ಕೆ ಸಹಕಾರಿಯಾಗಿದೆ’ ಎಂದರು.
‘ನೋಟು ಅಮಾನ್ಯಗೊಳಿಸಿದ್ದು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಕರಾಳ ದಿನ ಆಚರಿಸುತ್ತಿದ್ದಾರೆ. ಆದರೆ ನೋಟು ರದ್ದತಿಗೆ ಸಾರ್ವಜನಿಕರೇ ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದರು. ‘ಮೋದಿಯವರು ರಾಷ್ಟ್ರದ ಹಿತದೃಷ್ಟಿಯಿಂದ ಕೈಗೊಂಡಿರುವ ನಿರ್ಣಯಕ್ಕೆ ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದರು.