ಕಾರಟಗಿ: ವೀರರಾಣಿ ಕಿತ್ತೂರು ಚನ್ನಮ್ಮ ಅವರ 194ನೇ ವಿಜಯೋತ್ಸವ ಹಾಗೂ ಕಾರಟಗಿ ತಾಲ್ಲೂಕು ಪಂಚಮಸಾಲಿ ಸಮಾಜದ ಸಮಾವೇಶ ನ. 12ರಂದು ಬೆಳಿಗ್ಗೆ 10.30ಕ್ಕೆ ಕೆರೆ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ಅಧ್ಯಕ್ಷ ಚನ್ನಬಸಪ್ಪ ವಿ. ಸುಂಕದ, ಖಜಾಂಚಿ ಬಸವರಾಜ್ ಕುಡ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮಿ ಸಾನ್ನಿಧ್ಯ ವಹಿಸುವರು. ಉದ್ದಿಮೆದಾರ ಸುಂಕದ ಲಿಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ ಚಾಲನೆ ನೀಡುವರು. ವಕೀಲರಾದ ಸವಿತಾ ರಮೇಶ ಉಪನ್ಯಾಸ ನೀಡುವರು.
ಬೆಳಗ್ಗೆ ಪೂರ್ಣಕುಂಭ, ಕಳಸ, ವಾದ್ಯಮೇಳಗಳೊಂದಿಗೆ ಕಿತ್ತೂರ ಚನ್ನಮ್ಮ ಭಾವಚಿತ್ರದ ಮೆರವಣಿಗೆ ಶರಣಬಸವೇಶ್ವರ ದೇವಾಲಯದಿಂದ ಆರಂಭಗೊಂಡು ಪ್ರಮುಖ ಬೀದಿಗಳ ಮೂಲಕ ಕೆರೆ ಬಸವೇಶ್ವರ ಕಲ್ಯಾಣವರೆಗೆ ಸಾಗಲಿದೆ.
ಸಚಿವರಾದ ವಿನಯ್ ಆರ್. ಕುಲಕರ್ಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಶಿವರಾಜ್ ತಂಗಡಗಿ, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಾಲಿ, ಮಾಜಿ ಜನಪ್ರತಿನಿಧಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು, ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು.