ಹೆಚ್ಚು ಭಾರದ ವಾಹನಗಳು ಓಡಾಡುವುದರಿಂದ ಸ್ಥಳೀಯ ರಸ್ತೆಗಳು ಹಾಳಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುತ್ತದೆ. ಹಾಗೂ ಈ ಪ್ರದೇಶಕ್ಕೆ ಸಮೀಪದಲ್ಲಿ ಕೆಆರ್ಎಸ್ ಅಣೆಕಟ್ಟು ಸಹ ಇದ್ದು, ಇದರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ 30 ದಿನಗಳ ಕಾಲ ನಿಷೇಧಾಜ್ಞೆ ಮುಂದುವರಿಸಲಾಗಿದೆ’ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.