ಸೇಡಂ: ‘ಕಮಲಾವತಿ ನದಿಯನ್ನು ಸ್ವಚ್ಛಗೊಳಿಸುವಂತೆ ಆಗ್ರಹಿಸಿ ನ. 15ರಂದು ಪಟ್ಟಣದ ಬೆಳಿಗ್ಗೆ 9 ಗಂಟೆಗೆ ಪಂಚಲಿಂಗೇಶ್ವರ ದೇವಸ್ಥಾನದಿಂದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಕೇರಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಭಾನುವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ ಸೇಡಂ ಪಟ್ಟಣದ ಜೀವನದಿಯಾದ ಕಮಲಾವತಿ ನದಿಯ ನೀರು ಕಲುಷಿತಗೊಂಡಿದ್ದು, ಜೀವನೋಪಾಯಕ್ಕೆ ಬರುತ್ತಿಲ್ಲ. ಇದರಿಂದ ಸೇಡಂ ಜನತೆಗೆ ತೊಂದರೆಯಾಗುತ್ತಿದ್ದು, ವಿವಿಧ ರೀತಿಯ ರೋಗಗಳು ಹರಡುತ್ತಿವೆ.
ನದಿಯನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಬಾರಿ ಮನವಿ ಮಾಡಲಾಗಿದೆ. ಆದರೆ, ಇಲ್ಲಿಯವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ’ ಎಂದು ವಿಷಾದಿಸಿದರು. ಪಾದಯಾತ್ರೆ ಮೂಲಕ ಜನರಲ್ಲಿ ನದಿಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.