ಕಾರವಾರ: ಕಾರವಾರ–ಅಂಕೋಲಾ ಕ್ಷೇತ್ರದ ಅಭಿವೃದ್ಧಿಗಾಗಿ, ತಾವು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುವುದಾಗಿ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ಇಲ್ಲಿ ಪ್ರಕಟಿಸಿದರು.= ರಾಜಕೀಯ ಮರುಪ್ರವೇಶಕ್ಕೆ ಒತ್ತಾಯಿಸಿ ಅವರ ಮನೆ ಮುಂದೆ ನೆರೆದಿದ್ದ ನೂರಾರು ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೇ 15ರ ನಂತರ ಕ್ಷೇತ್ರದಲ್ಲಿ ಸಂಚರಿಸಿ, ಹಿರಿಯರ ಅಭಿಪ್ರಾಯ ಪಡೆದು ಮುಂದಡಿ ಇಡುವುದಾಗಿ ತಿಳಿಸಿದರು.