ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿವೇಶನ ಅಗತ್ಯವೇ?

Last Updated 13 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಅತ್ಯಾಧುನಿಕ ತಂತ್ರಜ್ಞಾನದ ಫಲವಾಗಿ ಇಂದು ವಿಶ್ವವೇ ನಮ್ಮ ಅಂಗೈಯಲ್ಲಿ ಇರುವಾಗ, ಉತ್ತರ ಕರ್ನಾಟಕದ ಕುಂದುಕೊರತೆಗಳನ್ನು ಚರ್ಚಿಸುವುದಕ್ಕಾಗಿ ಅಲ್ಲಿಗೇ ಹೋಗಿ ಅಧಿವೇಶನ ನಡೆಸುವುದು ಅಗತ್ಯವೇ? ಇಂಥ ಅಧಿವೇಶನಕ್ಕಾಗಿ ಇಷ್ಟೊಂದು ಹಲವು ಕೋಟಿ ರೂಪಾಯಿಗಳನ್ನು ಖರ್ಚು ಮಾಡುವುದು ಹಾಸ್ಯಾಸ್ಪದ.

ಅದಕ್ಕೆ ಬದಲಾಗಿ ಆ ಹಣವನ್ನೂ ಆ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಉಪಯೋಗಿಸಿದರೆ ಸಾರ್ಥಕವೆನಿಸುತ್ತದೆ. ಸುವರ್ಣಸೌಧ ಕಟ್ಟಡವನ್ನು ಕಾಲೇಜು ಅಥವಾ ಆಸ್ಪತ್ರೆಯನ್ನಾಗಿ ಪರಿವರ್ತಿಸಬಹುದು. ಮುಂಬರುವ ಸರ್ಕಾರವಾದರೂ ಈ ನಿಟ್ಟಿನಲ್ಲಿ ಯೋಚಿಸುವುದು ಉತ್ತಮ.

-ವಿ.ವಿಜಯೇಂದ್ರ ರಾವ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT