ಆನೇಕಲ್: ಕಡೆಯ ಕಾರ್ತೀಕ ಸೋಮವಾರದ ಪ್ರಯುಕ್ತ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ, ಅಭಿಷೇಕಗಳನ್ನು ಆಯೋಜಿಸಲಾಗಿತ್ತು. ಜನರು ಶ್ರದ್ಧಾ ಭಕ್ತಿಗಳಿಂದ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಪಟ್ಟಣದ ಬನ್ನೇರುಘಟ್ಟ ರಸ್ತೆಯ ಚಿನ್ನಪ್ಪ ಸ್ವಾಮಿ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ಸಂಭ್ರಮದಿಂದ ನಡೆಯಿತು.