ಚಾಮರಾಜನಗರ: ಜಿಲ್ಲೆಯ ವಿವಿಧ ಜಮೀನುಗಳಲ್ಲಿ ಕಾಣಿಸಿಕೊಂಡಿರುವ ಸೈನಿಕ ಹುಳುವಿನ ನಿಯಂತ್ರಣಕ್ಕೆ ಕೃಷಿ ಇಲಾಖೆ ಮುಂದಾಗಿದೆ. ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದ ಸೈನಿಕ ಹುಳುಗಳು ಈಗ ಯಳಂದೂರು, ಸಂತೇಮರಹಳ್ಳಿ, ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭತ್ತ, ರಾಗಿ, ಕಡಲೆ ಮತ್ತು ಮುಸುಕಿನ ಜೋಳದ ಹೊಲಗಳಿಗೆ ದಾಳಿ ಇಟ್ಟಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ತಲೆನೋವಾಗಿ ಪರಿಣಮಿಸಿದೆ.