ಆಸ್ಪತ್ರೆಯ ಸ್ವಚ್ಛತೆ, ತುರ್ತು ನಿರ್ವಹಣಾ ಸಿಬ್ಬಂದಿ ಹೊರತುಪಡಿಸಿ ಉಳಿದವರೆಲ್ಲರಿಗೂ ರಜೆ ನೀಡಲಾಗಿದೆ. ಆಸ್ಪತ್ರೆಗೆ ಹೊಂದಿಕೊಂಡಿರುವ ಔಷಧ ಅಂಗಡಿಗಳೂ, ಪ್ರಯೋಗಾಲಯಗಳು ಕೂಡಾ ಬಂದ್ ಆಗಿವೆ. ಸಹಜವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ದಟ್ಟಣೆ ಹೆಚ್ಚಿದೆ. ಗ್ರಾಮೀಣ ಹಾಗೂ ಹೋಬಳಿ ಪ್ರದೇಶಗಳ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಹಾಗೂ ದಾದಿಯರ ತಂಡವನ್ನು ಸಜ್ಜಾಗಿ ಇರಿಸಲಾಗಿದೆ. ಯಾವುದೇ ತುರ್ತುಪರಿಸ್ಥಿತಿ ನಿಭಾಯಿಸಲು ನಾವು ಸಿದ್ಧರಾಗಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.