ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕ ಸಮುದಾಯ ಭವನಕ್ಕೆ ₹ 1 ಕೋಟಿ ಹಣ ಮಂಜೂರು

Last Updated 14 ನವೆಂಬರ್ 2017, 9:16 IST
ಅಕ್ಷರ ಗಾತ್ರ

ಹುಳಿಯಾರು: ಸಮೀಪದ ಲಿಂಗಪ್ಪನಪಾಳ್ಯದಲ್ಲಿ ಕನಕ ಸಮುದಾಯ ಭವನ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ₹ 1 ಕೋಟಿ ಮಂಜೂರು ಮಾಡಿದ್ದಾರೆ. ಇತ್ತೀಚೆಗೆ ನಡೆದ ಸಮುದಾಯ ಭವನದ ಭೂಮಿ ಪೂಜೆಯಲ್ಲಿ ಶಾಸಕ ಸಿ.ಬಿ.ಸುರೇಶ್ ಬಾಬು ಅವರಿಗೆ ಅನುದಾನಕ್ಕಾಗಿ ಗ್ರಾಮಸ್ಥರು ಮನವಿ ಮಾಡಿದ್ದರು.

ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎನ್.ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಕಾಯಿ ಕುಮಾರ್ ಸೇರಿದಂತೆ ಶ್ರೀರಾಮ ಚಾರಿಟಬಲ್ ಟ್ರಸ್ಟ್‌ ನಿರ್ದೇಶಕ ಶಿವಕುಮಾರ್, ಮುಖಂಡರಾದ ಜಿಲೇಬಿ ರಾಜಣ್ಣ, ಗಾರೆ ಶಂಕರಪ್ಪ, ಸೊಸೈಟಿ ನಾಗರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಿ ಸಮುದಾಯ ಭವನಕ್ಕೆ ಅನುದಾನಕ್ಕೆ ಕೋರಿಕೆ ಸಲ್ಲಿಸಿದ್ದರು.

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಮದಾಯ ಭವನಕ್ಕೆ ಅನುದಾನ ಮಂಜೂರು ಮಾಡಿದ್ದಾರೆ. ಒಟ್ಟು ₹ 1.5 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT