ಯಾದಗಿರಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೇಳಲಾಗುವ ಪ್ರಶ್ನೆಗಳು, ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆಯ ಪ್ರಶ್ನೆಗಳು ಇತ್ಯಾದಿ ವಿಷಯಗಳಿಗೆ ಸಕಾಲದಲ್ಲಿ ಸರ್ಕಾರಕ್ಕೆ ಉತ್ತರ ಸಲ್ಲಿಸಬೇಕಾಗಿರುವುದರಿಂದ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಅಧೀನ ಸಿಬ್ಬಂದಿ ಅಧಿವೇಶನ ಮುಗಿಯುವವರೆಗೂ ಕಚೇರಿಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದ್ದಾರೆ.