ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಅಗತ್ಯದ ಬಗ್ಗೆ ಜನರು ಚಿಂತಿಸಬೇಕು ಎಂದು ಜೆಡಿಎಸ್ ಮುಖಂಡ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಅವರು ಹೇಳಿರುವ ಮಾತಿನಲ್ಲಿ ಅರ್ಥವಿದೆ. ಆದರೆ ಯಾವುದೇ ಪ್ರಾದೇಶಿಕ ಪಕ್ಷ ‘ಕುಟುಂಬದ ಪಕ್ಷ’ವಾಗಿ, ಕುಟುಂಬದ ‘ಆಸ್ತಿ’ಯಾಗಿ ಪರಿವರ್ತನೆ ಆಗಬಾರದಲ್ಲವೇ? ಅಂಥ ವಿವೇಕ ಕಾಯ್ದುಕೊಂಡಾಗ ಮಾತ್ರ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯ.