ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನ ಹೊಂದಿರುವ ಕಿದಂಬಿ ಶ್ರೀಕಾಂತ್ ಗಾಯದ ಕಾರಣ ಟೂರ್ನಿಯಲ್ಲಿ ಆಡುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ರಾಷ್ಟ್ರೀಯ ಚಾಂಪಿಯನ್ ಎಚ್.ಎಸ್.ಪ್ರಣಯ್, ಬಿ.ಸಾಯಿ ಪ್ರಣೀತ್, ಅಜಯ್ ಜಯರಾಮ್, ಸಹೋದರರಾದ ಸೌರಭ್ ಮತ್ತು ಸಮೀರ್ ವರ್ಮಾ ಅವರು ಭಾರತದ ಸವಾಲು ಎತ್ತಿ ಹಿಡಿಯಲಿದ್ದಾರೆ.