ಹೊನ್ನಾವರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಉಪವಿಭಾಗಾಧಿಕಾರಿ ಎಂ.ಎನ್.ಮಂಜುನಾಥ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
‘ಅಡುಗೆ ಅನಿಲ ದರ ಇಳಿಕೆ ಮಾಡಬೇಕು. ಅಡಿಕೆ- ಮತ್ತು ತೆಂಗಿಗೆ ಬೆಂಬಲ ಬೆಲೆ ನೀಡಬೇಕು. ಬೆಳೆ ವಿಮೆ ಪರಿಹಾರ ನೀಡುವಲ್ಲಿ ಇರುವ ಲೋಪದೋಷ ಸರಿಪಡಿಸಬೇಕು. ಅತಿಕ್ರಮಣ ಜಾಗ ಮಂಜೂರಿ ಮಾಡಿ ಅವರ ಹೆಸರನ್ನು ಪಹಣಿಯ 9ನೇ ಕಾಲಂನಲ್ಲಿ ಸೇರಿಸಬೇಕು. ಕಾಸರಕೋಡ ಟೊಂಕಾ ಅಳಿವೆಯ ಹೂಳೆತ್ತಿ ತಡೆಗೋಡೆ ನಿರ್ಮಿಸಬೇಕು’ ಎಂದು ಆಗ್ರಹಿಸಿದರು.