20 ವರ್ಷಗಳಿಂದ ಪ್ರತಿ ವರ್ಷ ದೀಪಾವಳಿ ಹಬ್ಬ ಮುಗಿದ ನಂತರ ಬೆಟ್ಟದ ಬಸವೇಶ್ವರ ದೇವಾಲಯ ಪ್ರಾಂಗಣದಲ್ಲಿ ಕೌಟೆಕಾಯಿ ಜಾತ್ರೆ ನಡೆದು ಬರುತ್ತಿದೆ. ದೀಪಾವಳಿ ಹಬ್ಬದ ದಿನಗಳಲ್ಲಿ ಕೌಟೆಕಾಯಿಯನ್ನು 2 ಭಾಗ ಮಾಡಿ ಒಳಗಿನ ತಿರುಳು ತೆಗೆದು ದೇವರಿಗೆ ದೀಪ ಬೆಳಗಿಸುವ ಸಂಪ್ರದಾಯವಿತ್ತು ಎಂದು ಜೆಸಿಐ ಸ್ಥಾಪಕ ಅಧ್ಯಕ್ಷ ಎಚ್.ಕೆ.ರಮೇಶ್, ದೇವಸ್ಥಾನ ಸಮಿತಿಯ ಅಧ್ಯಕ್ಷ ಶಾಂತಮಲ್ಲಪ್ಪ, ಪದಾಧಿಕಾರಿಗಳಾದ ಎಚ್.ಕೆ.ಗಣೇಶ್, ಕಾರ್ಯದರ್ಶಿ ಕರುಣ್ ಕುಮಾರ್ , ನಾಗೇಶ್ ಮತ್ತಿತರ ಗ್ರಾಮದ ಹಿರಿಯರು ಹೇಳುತ್ತಾರೆ.