ಒತ್ತುವರಿದಾರರಿಗೆ ನೀಡಿದ್ದ ಗಡವು ಮುಗಿದಿದ್ದರಿಂದ ಪೊಲೀಸರ ರಕ್ಷಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಎರಡು ಹಿಟಾಚಿ ಮತ್ತು ಮೂರು ಜೆಸಿಬಿ ಯಂತ್ರ ಬಳಸಿ ಕೆರೆಯ ಸುತ್ತಲೂ ಕಂದಕ ನಿರ್ಮಿಸಿ, ಅಡಿಕೆ ಮರಗಳನ್ನು ಉರುಳಿಸಲಾಯಿತು. ತಹಶೀಲ್ದಾರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು, ಡಿವೈಎಸ್ಪಿ, ಎಸ್.ಐ. ಅಣ್ಣಯ್ಯ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಸಿದ್ದಲಿಂಗಯ್ಯ ಹಾಜರಿದ್ದರು.