ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ರಂದು ಶೈಕ್ಷಣಿಕ ಸಮಾವೇಶ’

Last Updated 16 ನವೆಂಬರ್ 2017, 8:55 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟ(ಸಿಡಿಯೂಎಸ್‌ಎಂಎ)ದ ವತಿಯಿಂದ ಇದೇ 18ರಂದು ನಗರದ ಭುವನೇಂದ್ರ ಶಾಲೆ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಶೈಕ್ಷಣಿಕ ಸಮಾವೇಶ ಆಯೋಜಿಸಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎಚ್.ನರೇಂದ್ರ ಪೈ ಇಲ್ಲಿ ಬುಧವಾರ ತಿಳಿಸಿದರು.

ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ(ಕೆಎಎಂಎಸ್)ದ ರಾಜ್ಯ ಕಾರ್ಯದರ್ಶಿ ಡಿ.ಶಶಿಕುಮಾರ್ ಉದ್ಘಾಟನೆ ನೆರವೇರಿಸುವರು. ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯಸ್ವಾಮೀಜಿ ಸಾನಿಧ್ಯ ವಹಿಸುವರು. ಸಿಡಿಯೂಎಸ್‌ಎಂಎ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ರಮೇಶ್, ಕಾರ್ಯದರ್ಶಿ ಉಮಾಶಂಕರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಿಕ್ಷಣ ಇಲಾಖೆಯ ಬದಲಾ ಗುತ್ತಿರುವ ನಿಯಮ ಹಾಗೂ ನಿರ್ದೇಶನಗಳಿಂದ ಅನುದಾನ ರಹಿತ ಶಾಲೆ ನಡೆಸುವುದು ಕಷ್ಟವಾಗಿದೆ. ಶಿಕ್ಷಣ ಇಲಾಖೆಯಿಂದ ಪಠ್ಯ ಪುಸ್ತಕಗಳು ಶಾಲೆಗಳಿಗೆ ಸಮರ್ಪಕವಾಗಿ ಸರಬರಾ ಜಾಗಿಲ್ಲ. ಅದರಿಂದ ಶೈಕ್ಷಣಿಕ ವರ್ಷದ ಪಠ್ಯಕ್ರಮ ಮುಗಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.

ಒಕ್ಕೂಟದ ಕಾರ್ಯದರ್ಶಿ ಉಮಾ ಶಂಕರ್, ಖಜಾಂಚಿ ಇಶ್ರತ್ ಖಾನಂ, ಸದಸ್ಯ ನಂದಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT