ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿನಯ ಸಚಿವರಾಗಿಯೂ ಪ್ರಯೋಜನವಿಲ್ಲ’

Last Updated 16 ನವೆಂಬರ್ 2017, 10:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪಾಲಿಕೆಗೆ ಬರಬೇಕಿರುವ ಪಿಂಚಣಿ ಅನುದಾನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ನಿರಂತರ ಹೋರಾಟ ಮಾಡಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಕಿಂಚಿತ್ತೂ ಗಮನಿಸುತ್ತಿಲ್ಲ. ಸಚಿವರಾಗಿ ಜಿಲ್ಲೆಗೆ ಯಾವುದೇ ಪ್ರಯೋಜನವಿಲ್ಲ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಗೇಶ ಕಲಬುರ್ಗಿ ಲೇವಡಿ ಮಾಡಿದ್ದಾರೆ.

‘ಪಿಂಚಣಿ ಹಣ ಬಿಡುಗಡೆ ಆಗುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಸಚಿವರ ನಿರ್ಲಕ್ಷ್ಯದಿಂದಾಗಿ ಪಾಲಿಕೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ.

ಪಾಲಿಕೆಯಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವುದರಿಂದ ಅದರ ಶ್ರೇಯಸ್ಸು ಬಿಜೆಪಿಗೇ ಹೋಗುತ್ತದೆ ಎಂಬ ಮನೋಭಾವನೆಯಿಂದ ಅವರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಪಿಂಚಣಿ ಹಣಕ್ಕಾಗಿ ಕೋರ್ಟ್‌ ಮೆಟ್ಟಿಲೇರಲು ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿರುವುದು ಖೇದಕರ ಸಂಗತಿ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT