ಹುಬ್ಬಳ್ಳಿ: ‘ಪಾಲಿಕೆಗೆ ಬರಬೇಕಿರುವ ಪಿಂಚಣಿ ಅನುದಾನ ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ನಿರಂತರ ಹೋರಾಟ ಮಾಡಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಕಿಂಚಿತ್ತೂ ಗಮನಿಸುತ್ತಿಲ್ಲ. ಸಚಿವರಾಗಿ ಜಿಲ್ಲೆಗೆ ಯಾವುದೇ ಪ್ರಯೋಜನವಿಲ್ಲ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಗೇಶ ಕಲಬುರ್ಗಿ ಲೇವಡಿ ಮಾಡಿದ್ದಾರೆ.