ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಜಾಗೃತಿ: ಸ್ವಚ್ಛತಾ ಕಾರ್ಯಕ್ರಮ

Last Updated 16 ನವೆಂಬರ್ 2017, 10:45 IST
ಅಕ್ಷರ ಗಾತ್ರ

ಹೆಬ್ರಿ: ಅರಣ್ಯ ಇಲಾಖೆ ಸೋಮೇಶ್ವರ ವನ್ಯಜೀವಿ ವಲಯ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಮತ್ತು ಹೆಬ್ರಿ ಗ್ರಾಮ ಪಂಚಾಯಿತಿಯ ವತಿಯಿಂದ ಶನಿವಾರ ಪರಿಸರ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಸುಧಾಕರ ಹೆಗ್ಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯಿತಿ ಉಪಾಧ್ಯಕ್ಷೆ ವೀಣಾ ಪ್ರಭು, ಸೋಮೇಶ್ವರ ವನ್ಯಜೀವಿ ವಲಯದ ಅರಣ್ಯಾಧಿಕಾರಿ ವಾಣಿಶ್ರೀ ಹೆಗಡೆ, ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಶ್ರುತಿ ಶೇಖರ್ ಗೌಡ, ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಬೇಳಂಜೆ ಹರೀಶ ಪೂಜಾರಿ, ಕಾರ್ಯದರ್ಶಿ ಟಿ.ಜಿ.ಆಚಾರ್ಯ, ಪಂಚಾಯಿತಿ ಸದಸ್ಯ ನವೀನ ಅಡ್ಯಂತಾಯ, ಅಶೋಕ ಪ್ರಭು, ಪಂಚಾಯಿತಿ ಸದಸ್ಯರು, ಶಾಲಾ ಮಕ್ಕಳು, ಅರಣ್ಯ ಇಲಾಖೆಯ ಪ್ರಶಾಂತ್ ಉಪಸ್ಥಿತರಿದ್ದರು.

ಶಾಲಾ ಮಕ್ಕಳು, ಲಯನ್ಸ್ ಕ್ಲಬ್ ಸದಸ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಸರ ಜಾಗೃತಿ ಜಾಥಾದಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT