ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಲೆಟ್‌ ಪತ್ತೆಯಾದ ಕೊಠಡಿ ವಶಕ್ಕೆ ಪಡೆದ ಸಿಬಿಐ

Last Updated 16 ನವೆಂಬರ್ 2017, 10:45 IST
ಅಕ್ಷರ ಗಾತ್ರ

ಮಡಿಕೇರಿ: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿನಾಯಕ ವಸತಿಗೃಹದ ಕೊಠಡಿ ಸಂಖ್ಯೆ 315ರಲ್ಲಿ ದೊರೆತ ಬುಲೆಟ್‌ ಅನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಠಡಿ ಬಂದ್‌ ಮಾಡಿಸಿ, ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಹೆಚ್ಚಿನ ತನಿಖೆಗೆ ಮತ್ತೆ ಬರುವುದಾಗಿ ವಸತಿಗೃಹದ ಸಿಬ್ಬಂದಿಗೆ ತಿಳಿಸಿದ್ದಾರೆ.

ತಮಿಳುನಾಡು ಸಿಬಿಐ ಕಚೇರಿ ತನಿಖಾಧಿಕಾರಿಗಳು ಸಿದ್ದಾಪುರ ಸಮೀಪದ ಚೆಟ್ಟಳ್ಳಿಯ ಕಾಫಿ ಸಂಶೋಧನಾ ಸಂಸ್ಥೆಯ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದು, ಒಂದು ವಾರದಿಂದ ಗೋಪ್ಯವಾಗಿ ಪ್ರಕರಣದ ಮಾಹಿತಿ ಕಲೆ ಹಾಕುತ್ತಿದ್ದರು. ಬುಧವಾರ ಬೆಳಿಗ್ಗೆ ದೆಹಲಿಯ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದೊಂದಿಗೆ ಬೆಂಗಳೂರಿಗೆ ತೆರಳಿರುವ ಅಧಿಕಾರಿಗಳು, ಮತ್ತೆ ಚೆಟ್ಟಳ್ಳಿಗೆ ಬರುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT