ತಾಲ್ಲೂಕಿನಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಅಧ್ಯಕ್ಷೆ ಶ್ವೇತಾ ವೆಂಕನಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಸದಸ್ಯರಾದ ಗವಿಸಿದ್ದಪ್ಪ ಸಾಹುಕಾರ, ಲಿಂಗರಾಜ ಹಟ್ಟಿ, ವಾಹಿದ್ ಖಾದ್ರಿ ಧ್ವನಿಗೂಡಿಸಿದರು. ಆರೋಗ್ಯ ಇಲಾಖೆ ಸ್ವಚ್ಛತೆ, ಸಾಮಾನ್ಯ ಜನರ ಆರೋಗ್ಯ ಸಂರಕ್ಷಣೆ ಹಾಗೂ ಆಸ್ಪತ್ರೆಗಳ ನಿರ್ವಹಣೆ ನಿರ್ಲಕ್ಷ್ಯದ ಬಗ್ಗೆ ಗಮನ ಸೆಳೆದರು.