ಬೆಳಗಿನ ಜಾವ ಎದೆ ನೋವಿನ ಕಾರಣ ಶಾಂತವ್ವ ಅವರನ್ನು ಬನಹಟ್ಟಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಮಖಂಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿಗೆ ತೆರಳುವಷ್ಟರಲ್ಲಿ ಶಾಂತವ್ವ ಸಾವನ್ನಪ್ಪಿದ್ದಾರೆ. ಬನಹಟ್ಟಿಯಲ್ಲಿಯೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆತಿದ್ದರೆ ಶಾಂತವ್ವ ಉಳಿಯುತ್ತಿದ್ದರು ಎಂದು ಸಂಬಂಧಿಗಳು ತಿಳಿಸಿದ್ದಾರೆ.