ಸರ್ಕಾರ ಬಂಟ್ವಾಳದ ಕಳ್ಳಿಗೆ ಗ್ರಾಮವನ್ನು ಪೋಡಿಮುಕ್ತ ಗ್ರಾಮವನ್ನಾಗಿಸಬೇಕು ಎಂದು ಆದೇಶ ಹೊರಡಿಸಿದೆ. ಕಳ್ಳಿಗೆ ಗ್ರಾಮದಲ್ಲಿರುವ 97/1 ಸರ್ವೆ ನಂಬರ್ ನ 28 ಎಕರೆ ಜಮೀನನ್ನು ಅತಿಕ್ರಮಿಸಿದ್ದು ಅದರಲ್ಲಿ 10 ಎಕರೆ ಭೂಮಿಯಲ್ಲಿ ರಬ್ಬರ್ ಬೆಳೆಯನ್ನು ಬೆಳೆಸಿರುತ್ತಾರೆ. ಪೋಡಿ ಮುಕ್ತ ಗ್ರಾಮದ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಇದರಲ್ಲೂ ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿ ಆ ಸರ್ವೆ ನಂಬರ್ ಅನ್ನು ಪೋಡಿ ಮುಕ್ತ ಗ್ರಾಮದಿಂದ ತೆಗೆದಿರುವುದಕ್ಕೆ ಸಚಿವರು ನೇರವಾಗಿ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಯೋಗೀಶ್ ಭಟ್, ನಿತಿನ್ ಕುಮಾರ್, ಸಂಜಯ್ ಪ್ರಭು ಉಪಸ್ಥಿತರಿದ್ದರು.