ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಣಿಪಾಲ ವಿಶ್ವವಿದ್ಯಾಲಯದ ಇನ್ನೋವೇಶನ್ ಕೇಂದ್ರದ ಸಹಯೋಗದೊಂದಿಗೆ ಸ್ಪರ್ಧೆ ಆಯೋಜಿಸಲಾಗಿದೆ. ಕುಡಿಯುವ ನೀರಿನ ಮೂಲಗಳು, ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಿಕ್ಷಣ, ಘನತ್ಯಾಜ್ಯ ನಿರ್ವಹಣೆ, ವಲಸೆ ಕಾರ್ಮಿಕರು ಹಾಗೂ ಮಹಿಳಾ ಆರೋಗ್ಯ ಎಂಬ ಐದು ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪದವಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಲಹೆ– ಚಿಂತನೆಯನ್ನು ಮುಂದಿಡಬಹುದು ಎಂದರು.