‘ಜಿಲ್ಲೆಯ ತಲಗುಂದ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಭಾಗದಿಂದ ಗ್ರಾನೈಟ್ ಮತ್ತು ಫಿಲ್ಟರ್ ಮರಳನ್ನು ಮಾಲೂರು ಕೈಗಾರಿಕಾ ಪ್ರದೇಶ, ಬೆಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಕೋಲಾರ ತಾಲ್ಲೂಕಿನ ರಾಮಸಂದ್ರ ಗೇಟ್ ಬಳಿ ವಶಕ್ಕೆ ಪಡೆಯಲಾಗಿದೆ ಎಂದು ಇಲಾಖೆಯ ಹಿರಿಯ ಭೂವಿಜ್ಞಾನಿ ನಂಜುಂಡಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು. ಮಾಲೂರು ಮತ್ತು ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಲಾರಿ ಚಾಲಕರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.