ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದಿಂದ ಜಿಲ್ಲೆಯಾದ್ಯಂತ ರೋಗಿಗಳು ಪರದಾಡಿದರು. ಅವರು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡಿದ್ದರು. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಂದಿಗಿಂತ ರೋಗಿಗಳ ಸಂಖ್ಯೆ ಅಧಿಕವಾಗಿತ್ತು. ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಚಿಕಿತ್ಸೆಗಾಗಿ ಕಾರ್ಡ್ ಮಾಡಿಸಿದರು. ಅಲ್ಲದೇ ಎಲ್ಲ ವಿಭಾಗಗಳಲ್ಲಿಯೂ ರೋಗಿಗಳು ಸಾಲು ಸಾಲಾಗಿ ನಿಂತಿದ್ದರು.