ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಸ್ಯನ ಕಿವಿ ಕಚ್ಚಿದ ಪಂಚಾಯಿತಿ ಅಧ್ಯಕ್ಷೆ ಪತಿ

Last Updated 17 ನವೆಂಬರ್ 2017, 19:57 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮಣಿ ಅವರ ಪತಿ ಪರಮೇಶ್ ಅವರು ಪಂಚಾಯಿತಿ ಸದಸ್ಯ ಜಗದೀಶ್ ಬಾಬು ಅವರ ಕಿವಿಯನ್ನು ಕಚ್ಚಿ ತುಂಡರಿಸಿದ್ದಾರೆ. ಬಾಬು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಪತ್ನಿಯ ಅಧಿಕಾರವನ್ನು ಚಲಾಯಿಸಿ ಪರಮೇಶ್, ಪಂಚಾಯಿತಿಯಲ್ಲಿ ಅವ್ಯವಹಾರ ನಡೆಸಿದ್ದಾರೆ. ಕಚೇರಿಗೆ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ನಾನು ಆಗ್ರಹಿಸಿದ್ದೆ. ಇದಕ್ಕೆ ಈ ಕೃತ್ಯ ಎಸಗಿದ್ದಾರೆ’ ಎಂದು ಬಾಬು ದೂರಿದ್ದಾರೆ.

‘ಜಗದೀಶ್ ಬಾಬು 2010-11ನೇ ಸಾಲಿನಲ್ಲಿ ನಡೆದಿದ್ದ ಕಾಮಗಾರಿಗೆ ಅಕ್ರಮವಾಗಿ ಬಿಲ್ ಮಾಡಿಕೊಡುವಂತೆ ಒತ್ತಾಯಿಸಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಅವಾಚ್ಯವಾಗಿ ನಿಂದಿಸಿದರು. ಏಕಾಏಕಿ ಹಲ್ಲೆ ನಡೆಸಿದರು’ ಎಂದು ಪರಮೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT